ಕ್ರೀಡೆ

ಭಾರತ ವಿರುದ್ಧ ಮೂರನೇ ಏಕದಿನ: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ; ಬೂಮ್ರಾ ಹೊರಕ್ಕೆ

ಎಡ ಮೊಣಕಾಲಿನ ಗಾಯದಿಂದ ಜಸ್ಪ್ರೀತ್ ಬೂಮ್ರಾ ಅಲಭ್ಯ; ಸರಣಿ ನಿರ್ಣಾಯಕ ಪಂದ್ಯದಲ್ಲಿ ಭಾರತಕ್ಕೆ ಪ್ರಮುಖ ಬದಲಾವಣೆ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ನಿರ್ಣಾಯಕ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ನಾಯಕ ಹ್ಯಾರಿ ಬ್ರೂಕ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.

ಮೂರು ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು ತಲಾ ಒಂದು ಪಂದ್ಯ ಗೆದ್ದಿರುವುದರಿಂದ ಸರಣಿ 1-1 ಸಮಬಲದಲ್ಲಿದೆ. ಹೀಗಾಗಿ ಈ ಪಂದ್ಯ ಸರಣಿ ವಿಜೇತರನ್ನು ನಿರ್ಧರಿಸಲಿದೆ.

ಭಾರತಕ್ಕೆ ಈ ಪಂದ್ಯದಲ್ಲಿ ಪ್ರಮುಖ ಹಿನ್ನಡೆಯಾಗಿದ್ದು, ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಗಾಯದ ಕಾರಣದಿಂದ ತಂಡದಿಂದ ಹೊರಗುಳಿದಿದ್ದಾರೆ. ಎರಡನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಅವರ ಎಡ ಮೊಣಕಾಲಿಗೆ ಪೆಟ್ಟಾಗಿದ್ದು, ಅದರ ಪರಿಣಾಮವಾಗಿ ಊತ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಮೂರನೇ ಪಂದ್ಯಕ್ಕೆ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಿಳಿಸಿದೆ.

ಭಾರತ ತಂಡದಲ್ಲಿ ಕೆ.ಎಲ್. ರಾಹುಲ್, ಅರ್ಷದೀಪ್ ಸಿಂಗ್ ಹಾಗೂ ಯುವ ವೇಗಿ ಪ್ರಿನ್ಸ್ ಯಾದವ್ ಮತ್ತೆ ಸ್ಥಾನ ಪಡೆದಿದ್ದಾರೆ.

ಭಾರತ ತಂಡ: ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಗುರ್ನೂರ್ ಬ್ರಾರ್, ಪ್ರಿನ್ಸ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ.

ಇಂಗ್ಲೆಂಡ್ ತಂಡ: ಬೆನ್ ಡಕೆಟ್, ಜೇಕಬ್ ಬೆಥೆಲ್, ಜೋ ರೂಟ್, ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಗಸ್ ಅಟ್ಕಿನ್ಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಜೋಶ್ ಟಂಗ್.

Related Articles

Leave a Reply

Your email address will not be published. Required fields are marked *

Back to top button