ಜಿಲ್ಲಾಸುದ್ದಿ
ಜೇವರ್ಗಿ ಕಾರ್ಯಕ್ರಮಕ್ಕೆ ನಟ ಚೇತನ್ ಅವರಿಗೆ ಆಹ್ವಾನ
ಸಾಮಾಜಿಕ ಹಾಗೂ ರಾಜಕೀಯ ವಿಚಾರಗಳ ಕುರಿತು ಚರ್ಚೆ; ದಲಿತ ಸೇನೆ ನಿಯೋಗದಿಂದ ಭೇಟಿ

ಸಾಮಾಜಿಕ ಹೋರಾಟಗಾರ ಹಾಗೂ ಚಲನಚಿತ್ರ ನಟ ಚೇತನ್ ಅಹಿಂಸಾ ಅವರಿಗೆ ಬೆಂಗಳೂರಿನ ನಿವಾಸದಲ್ಲಿ ದಲಿತ ಸೇನೆಯ ಜಿಲ್ಲಾ ಅಧ್ಯಕ್ಷ ಶಿವಕುಮಾರ ಗೊಳಾ ನೇತೃತ್ವದ ನಿಯೋಗ ಭೇಟಿ ನೀಡಿ, ಜೇವರ್ಗಿಯಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮಕ್ಕೆ ಆಹ್ವಾನ ನೀಡಿತು.
ಭೇಟಿಯ ವೇಳೆ ಸುಮಾರು ಎರಡು ಗಂಟೆಗಳ ಕಾಲ ಸಾಮಾಜಿಕ ಹಾಗೂ ರಾಜಕೀಯ ವಿಚಾರಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಸಮಾಜದ ಅಭಿವೃದ್ಧಿ, ಯುವಜನರ ಪಾತ್ರ ಹಾಗೂ ಸಮಕಾಲೀನ ವಿಷಯಗಳ ಕುರಿತು ಪರಸ್ಪರ ಅಭಿಪ್ರಾಯ ವಿನಿಮಯವೂ ನಡೆಯಿತು.
ಈ ಸಂದರ್ಭದಲ್ಲಿ ದಲಿತ ಸೇನೆ ವಿದ್ಯಾರ್ಥಿ ಒಕ್ಕೂಟದ ಕಲಬುರಗಿ ವಿಭಾಗೀಯ ಅಧ್ಯಕ್ಷ ಕಪೀಲ್ ವಾಲಿ, ಬಸವರಾಜ ಮಾಡಗಿ, ಬಸವರಾಜ ಹಡಪದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.



