ರಾಜಕೀಯ

ಜೆಡಿಎಸ್ ಗ್ರಾಮೀಣ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ

ಪಕ್ಷ ಸಂಘಟನೆ ಬಲಪಡಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸಲು ನೂತನ ಪದಾಧಿಕಾರಿಗಳಿಗೆ ಕರೆ

ಕಲಬುರಗಿ: ಜಿಲ್ಲಾ ಜಾತ್ಯತೀತ ಜನತಾದಳ (ಜೆಡಿಎಸ್) ವತಿಯಿಂದ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ವಿವಿಧ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ನೂತನ ಪದಾಧಿಕಾರಿಗಳಿಗೆ ಶನಿವಾರ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಲಾಯಿತು.

ಜಿಲ್ಲಾಧ್ಯಕ್ಷ ಬಾಲರಾಜ ಎ. ಗುತ್ತೇದಾರ ಅವರ ಆದೇಶದ ಮೇರೆಗೆ, ಗ್ರಾಮೀಣ ಮತಕ್ಷೇತ್ರದ ಅಧ್ಯಕ್ಷ ಗಂಗಾಧರ ಆರ್. ಪಂಚಾಳ ಅಂಬಲಗಾ ಅವರ ನೇತೃತ್ವದಲ್ಲಿ ಹಾಗೂ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಅವರ ಸಮ್ಮುಖದಲ್ಲಿ ನೇಮಕಾತಿ ಕಾರ್ಯಕ್ರಮ ನಡೆಯಿತು.

ನೂತನ ಪದಾಧಿಕಾರಿಗಳಾಗಿ ಸಂಜೀವಕುಮಾರ ಮಡಕಿ ಕಾರ್ಯಾಧ್ಯಕ್ಷರಾಗಿ, ಅಣ್ಣಪ್ಪ ಶಿರಗಾಪೂರ ವಿ.ಕೆ. ಸಲಗರ, ಪ್ರಕಾಶ ಗೋನೆಕಿ ಅಂಬಲಗಾ, ರಾಜೇಂದ್ರ ಜಿ. ರೊಳೆ ಹಾಗೂ ವೀರಂತಪ್ಪ ಆರ್. ಲಿಂಗನಾಯಕ ಹಿರಿಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ರಮಜಾನ ಬಿ. ಮುದ್ದಡಗಾ ಅವರನ್ನು ಮಹಾಪ್ರಧಾನ ಕಾರ್ಯದರ್ಶಿಯಾಗಿ, ಪ್ರಕಾಶ ದೊಡ್ಡಮನಿ ತೆಗನೂರ ಹಾಗೂ ದೇವಿಂದ್ರ ಎ. ಅಂಬಲಗಾ ಅವರನ್ನು ಸಂಘಟನಾ ಕಾರ್ಯದರ್ಶಿಗಳಾಗಿ, ಬಂಡಪ್ಪ ಡಿ. ಸಂಗೋಳಗಿ ಅವರನ್ನು ಉಪಾಧ್ಯಕ್ಷರಾಗಿ ಹಾಗೂ ಬಾಬುರಾವ ಹೆಚ್. ಬಿರಾದಾರ ಅವರನ್ನು ಸಹ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಬಸವರಾಜ ಬಿರಬಿಟ್ಟಿ, ಗ್ರಾಮೀಣ ಮತಕ್ಷೇತ್ರದಲ್ಲಿ ಜೆಡಿಎಸ್ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ನೂತನ ಪದಾಧಿಕಾರಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಪಕ್ಷದ ತತ್ವ, ಸಿದ್ಧಾಂತ ಹಾಗೂ ಜನಪರ ಕಾರ್ಯಕ್ರಮಗಳನ್ನು ಮನೆಮನೆಗೆ ತಲುಪಿಸುವ ಮೂಲಕ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಬೇಕು ಎಂದು ಕರೆ ನೀಡಿದರು.

ಜಿಲ್ಲಾ ಯುವಘಟಕ ಅಧ್ಯಕ್ಷ ಪ್ರವೀಣ ಎಲ್. ಮಾತನಾಡಿ, ಯುವಕರನ್ನು ಪಕ್ಷದ ಸಂಘಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಗ್ರಾಮೀಣ ಭಾಗದಲ್ಲಿ ಜೆಡಿಎಸ್‌ಗೆ ಮತ್ತಷ್ಟು ಬಲ ತುಂಬುವ ಅಗತ್ಯವಿದೆ. ನೂತನ ಪದಾಧಿಕಾರಿಗಳು ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷದ ಸಂಘಟನೆಯನ್ನು ಪರಿಣಾಮಕಾರಿಯಾಗಿ ಕಟ್ಟಬೇಕು ಎಂದರು.

ಚಂದ್ರಕಾಂತ ಮೋರೆ ಮಾತನಾಡಿ, ನೂತನ ಪದಾಧಿಕಾರಿಗಳ ನೇಮಕ ಪಕ್ಷದ ಸಂಘಟನೆಗೆ ಹೊಸ ಚೈತನ್ಯ ನೀಡಲಿದೆ. ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಾಮಾಜಿಕ ಜಾಲತಾಣ ಅಧ್ಯಕ್ಷ ನಾಗೇಶ ಹೆಬ್ಬಾಳ, ಜಿಲ್ಲಾ ಸಂಚಾಲಕ ಶಿವಲಿಂಗಪ್ಪ ಪಾಟೀಲ್ ಸೇರಿದಂತೆ ಪಕ್ಷದ ಹಲವು ಮುಖಂಡರು, ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button