ಕಲ್ಯಾಣ ಕರ್ನಾಟಕ

ಕಲಬುರಗಿಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್‌ಗೆ ಅಭೂತಪೂರ್ವ ಸ್ವಾಗತ

ಕಲಬುರಗಿ: ಬೀದರ್‌ನಿಂದ ವಿಶೇಷ ವಿಮಾನದಲ್ಲಿ ಸೋಮವಾರ ತಡರಾತ್ರಿ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅಭೂತಪೂರ್ವ ಸ್ವಾಗತ ಕೋರಿದರು.

ವಿಮಾನ ನಿಲ್ದಾಣದಲ್ಲಿ ಸಚಿವರು, ಶಾಸಕರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಡಿ.ಕೆ. ಶಿವಕುಮಾರ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ತೆರೆದ ವಾಹನದಲ್ಲಿ ನಗರದ ಕಾಂಗ್ರೆಸ್ ಕಚೇರಿಯತ್ತ ತೆರಳಿದ ಸಂದರ್ಭದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಾವಿರಾರು ಕಾರ್ಯಕರ್ತರು ಜಮಾಯಿಸಿ ಜಯಘೋಷಗಳನ್ನು ಮೊಳಗಿಸಿದರು.

ವಿಶ್ವವಿದ್ಯಾಲಯ ಗೇಟ್, ಓಂನಗರ ಗೇಟ್, ಬಿಲಗುಂದಿ ಸರ್ಕಲ್ (ಖರ್ಗೆ ವೃತ್ತ), ಜಿಮ್ಸ್ ಆಸ್ಪತ್ರೆ ಮುಂಭಾಗ ಹಾಗೂ ಕಾಂಗ್ರೆಸ್ ಕಚೇರಿ ಎದುರು ಕಾರ್ಯಕರ್ತರು ಸಾಲುಗಟ್ಟಿ ನಿಂತು ಹೂವಿನ ಮಳೆ ಸುರಿಸುವ ಮೂಲಕ ಡಿ.ಕೆ. ಶಿವಕುಮಾರ್ ಅವರಿಗೆ ಭವ್ಯ ಸ್ವಾಗತ ನೀಡಿದರು. ಹಲವೆಡೆ ಪಕ್ಷದ ಧ್ವಜಗಳನ್ನು ಬೀಸುತ್ತಾ ಹಾಗೂ ಘೋಷಣೆಗಳನ್ನು ಕೂಗುತ್ತಾ ಕಾರ್ಯಕರ್ತರು ಸಂಭ್ರಮ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಜನಪ್ರತಿನಿಧಿಗಳು ಹಾಗೂ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ನಗರದಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಡಿ.ಕೆ. ಶಿವಕುಮಾರ್ ಅವರ ಆಗಮನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ವಿಶೇಷ ಉತ್ಸಾಹ ಕಂಡುಬಂತು.

Related Articles

Leave a Reply

Your email address will not be published. Required fields are marked *

Back to top button