ಸಮಾಜ

ಬೀದರ್‌ನಲ್ಲಿ ಆ.26ಕ್ಕೆ ಹೇಮ-ವೇಮ ಸಮುದಾಯ ಭವನ ಉದ್ಘಾಟನೆ

ಉದ್ಘಾಟನಾ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳಲು ಶಂಕರ ರೆಡ್ಡಿ ಚಟ್ಠಾ ಮನವಿ

ಬೀದರ್, ಆ.16: ಬೀದರ್‌ನ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಆವರಣದಲ್ಲಿ ನಿರ್ಮಿಸಲಾಗಿರುವ ಹೇಮ-ವೇಮ ಸಮುದಾಯ ಭವನದ ಉದ್ಘಾಟನಾ ಸಮಾರಂಭವು ಆ.26ರಂದು ನಡೆಯಲಿದೆ ಎಂದು ಜಿಲ್ಲಾ ರೆಡ್ಡಿ ಸಮಾಜದ ಅಧ್ಯಕ್ಷ ಶಂಕರ ರೆಡ್ಡಿ ಚಟ್ಠಾ ತಿಳಿಸಿದ್ದಾರೆ.

ನಗರದಲ್ಲಿ ಶನಿವಾರ ನಡೆದ ತಾಲೂಕು ರೆಡ್ಡಿ ಸಮಾಜದ ಸಭೆಯಲ್ಲಿ ಮಾತನಾಡಿದ ಅವರು, ಸಮುದಾಯ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ರೆಡ್ಡಿ ಸಮಾಜದ ಗುರುಗಳು, ರಾಜಕೀಯ ಗಣ್ಯರು ಹಾಗೂ ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲೂಕಿನ ರೆಡ್ಡಿ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾರಂಭವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ರೆಡ್ಡಿ ಸಮಾಜದ ಉಪಾಧ್ಯಕ್ಷ ರಾಜೇಂದ್ರ ರೆಡ್ಡಿ ಶೇರಿಕಾರ್, ಪ್ರಮುಖರಾದ ಓಂ ರೆಡ್ಡಿ, ಬಾಬು ರೆಡ್ಡಿ, ಸಂಜು ರೆಡ್ಡಿ ಜಂಪಾ, ನರಸಿಂಹ ರೆಡ್ಡಿ, ವಿಜಯ ರೆಡ್ಡಿ, ರವಿ ರೆಡ್ಡಿ ಮುದ್ನಾಳ, ಪಾಂಡುರಂಗ ರೆಡ್ಡಿ, ರಾಮ ರೆಡ್ಡಿ, ಗೋಪಾಲ ರೆಡ್ಡಿ, ಶಿವ ರೆಡ್ಡಿ, ನಾಗ ರೆಡ್ಡಿ, ಗೋವಿಂದ ರೆಡ್ಡಿ, ಕೃಷ್ಣ ರೆಡ್ಡಿ, ಚಂದ್ರಕಾಂತ ರೆಡ್ಡಿ, ರಾಜರೆಡ್ಡಿ, ವಿಠ್ಠಲ ರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಜೈಪಾಲ್ ರೆಡ್ಡಿ ಸ್ವಾಗತಿಸಿದರು. ಶ್ರೀನಿವಾಸ್ ರೆಡ್ಡಿ ಮುದ್ನಾಳ ಕಾರ್ಯಕ್ರಮ ನಿರೂಪಿಸಿದರು. ಭರತ್ ರೆಡ್ಡಿ ವಂದಿಸಿದರು.

Related Articles

Leave a Reply

Your email address will not be published. Required fields are marked *

Back to top button